ಮರಕ್ಕೆ ಬಸ್ ಢಿಕ್ಕಿ: ಪ್ರಯಾಣಿಕರು ಪಾರು

Update: 2017-05-24 17:31 GMT

ಮಂಗಳೂರು, ಮೇ 24: ಮಂಗಳೂರಿನಲ್ಲಿ ರಾತ್ರಿ ಸುರಿದ ಬಿರುಸಿನ ಮಳೆಯಿಂದಾಗಿ ಕೆಎಸ್ಸಾರ್ಟಿಸಿ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದ ಘಟನೆ ಎಂ.ಜಿ. ರಸ್ತೆಯಲ್ಲಿ ನಡೆದಿದೆ.

ಘಟನೆಯಲ್ಲಿ ಪ್ರಯಾಣಿಕರು ಪಾರಾಗಿದ್ದಾರೆ. ಹಾಸನ-ಮಂಗಳೂರು ಕೆಎಸ್ಸಾರ್ಟಿಸಿ ಬಸ್ ಎಂ.ಜಿ. ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ. ಬಸ್ ಹಾಸನದಿಂದ ಮಂಗಳೂರಿಗೆ ಆಗಮಿಸುತ್ತಿತ್ತು. ಕೆಲವೇ ಮಂದಿ ಪ್ರಯಾಣಿಕರು ಇದ್ದುದರಿಂದ ಯಾವುದೇ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News