ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು

Update: 2017-05-26 15:10 GMT

ಬೆಂಗಳೂರು, ಮೇ 26: ನಿರ್ಮಾಣ ಹಂತದ ಕಟ್ಟಡದ ನಾಲ್ಕನೆ ಮಹಡಿಯಲ್ಲಿ ಮಲಗಲು ಹೋಗುತ್ತಿದ್ದ ಕಾರ್ಮಿಕನೊಬ್ಬ ಆಯತಪ್ಪಿ ಬಿದ್ದು ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹೆಚ್‌ಎಸ್‌ಆರ್ ಲೇಔಟ್‌ನ ಒಂದನೆ ಹಂತದ 27ನೇ ಮುಖ್ಯರಸ್ತೆಯ ನಿರ್ಮಾಣ ಹಂತದ ಕಟ್ಟಡದ ಬಳಿ ಶೆಡ್ ಹಾಕಿಕೊಂಡು ವಾಸಿಸುತ್ತಿದ್ದ ರಾಯಚೂರು ಮೂಲದ ಭೀಮ (25) ಮೃತಪಟ್ಟ ಕಾರ್ಮಿಕ ಎಂದು ಗುರುತಿಸಲಾಗಿದೆ.

ಗುರುವಾರ ರಾತ್ರಿ 11ರ ಸುಮಾರಿಗೆ ಮದ್ಯ ಸೇವಿಸಿ ಕಟ್ಟಡದ ನಾಲ್ಕನೆ ಮಹಡಿಯ ಮೇಲೆ ಮಲಗಲು ಹೋಗಿದ್ದಾನೆ. ನಾಲ್ಕನೆ ಮಹಡಿಗೆ ಬಂದ ಆತ ಅಲ್ಲಿಂದ ಆಯತಪ್ಪಿ ಬಿದ್ದು ಮೃತಪಟ್ಟಿರುವುದಾಗಿ ತಿಳಿದುಬಂದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಎಚ್‌ಎಸ್‌ಆರ್ ಲೇಔಟ್ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News