ರೈಸ್ ಮಿಲ್‌ನಲ್ಲಿ ಅಗ್ನಿ ದುರಂತ; 6 ಸಾವು

Update: 2017-05-26 15:51 GMT

ಚೆನ್ನೈ , ಮೇ 26: ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ದಳವಾಯಿನ್‌ ಪೇಟೆ ಗ್ರಾಮದ ರೈಸ್‌ ಮಿಲ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಆರು ಮಂದಿ ಸಜೀವ ದಹನಗೊಂಡ ಘಟನೆ ಇಂದು ಸಂಭವಿಸಿದೆ.
 ರೈಸ್‌ಮಿಲ್ ನ ಚಿಮಣಿಗೆ ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡಿದ್ದು, ಇದರ ಪರಿಣಾಮವಾಗಿ ಕಟ್ಟಡ ಕುಸಿದು ಬಿದ್ದಿದೆ.ಕಟ್ಟಡದ ಅವಶೇಷಗಳಡಿಯಲ್ಲಿ ಹಲವು ಮಂದಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬಂದಿಗಳು ಸ್ಥಳಕ್ಕೆ ಆಗಮಿಸಿ ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡವರ ರಕ್ಷಣೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News