ಕೊರಗ ಮಕ್ಕಳಿಗೆ ಕ್ರೀಡೆಯಲ್ಲಿ ವಿಶೇಷ ತರಬೇತಿಗೆ ಯೋಜನೆ

Update: 2017-05-26 18:40 GMT

ಉಡುಪಿ, ಮೇ 26: ಸಿದ್ಧಿ ಜನಾಂಗದ ಯುವಕ ಯುವತಿಯರಿಗೆ ಕ್ರೀಡೆಯಲ್ಲಿ ವಿಶೇಷ ತರಬೇತಿ ನೀಡುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಕ್ರೀಡಾಶಾಲೆಯನ್ನು ಮಂಜೂರು ಮಾಡಲಾಗಿದ್ದು, ಇದರ ಕೆಲಸ ಸದ್ಯದಲ್ಲೇ ಆರಂಭಿಸಲಾಗುವುದು. ಇದೇ ಮಾದರಿಯಲ್ಲಿ ಕೊರಗ ಸಮು ದಾಯದ ಮಕ್ಕಳಿಗೆ ಕ್ರೀಡೆಯಲ್ಲಿ ವಿಶೇಷ ತರಬೇತಿ ನೀಡಲು ಯೋಜನೆ ರೂಪಿಸ ಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

ಉಡುಪಿ ಜಿಪಂ, ಯುವ ಸಬಲೀ ಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಕೊರಗ ಸಮು ದಾಯದ ಯುವಕ ಯುವತಿ ಯರಿಗಾಗಿ ಆಯೋಜಿಸಲಾದ ಜಿಲ್ಲಾಮಟ್ಟದ ಕ್ರೀಡೋತ್ಸವವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಅಜ್ಜರಕಾಡಿನಲ್ಲಿರುವ ಈಜುಕೊಳಕ್ಕೆ ರೂಫಿಂಗ್ ನಿರ್ಮಿಸಲು 1 ಕೋ.ರೂ., ಹೆಣ್ಣು ಮಕ್ಕಳ ಕ್ರೀಡಾ ಹಾಸ್ಟೆಲ್ ಸ್ಥಾಪನೆಗೆ 1 ಕೋ. ರೂ., ಅಂತಾರಾಷ್ಟ್ರೀಯ ಮಟ್ಟದ ಜಿಮ್ ಕೇಂದ್ರ ನಿರ್ಮಿಸಲು 2 ಕೋ. ರೂ. ಮಂಜೂರು ಮಾಡಲಾಗಿದೆ. ನೇಜಾರಿನಲ್ಲಿ ಅಂತಾರಾಷ್ಟ್ರೀಯ ಈಜು ಕೊಳ ನಿರ್ಮಿಸಲು 8 ಕೋ. ರೂ. ಅನು ದಾನದ ಪ್ರಸ್ತಾಪನೆಯನ್ನು ಕೇಂದ್ರ ಸರಕಾ ರಕ್ಕೆ ಕಳುಹಿಸಲಾಗಿದೆ ಎಂದು ಹೇಳಿದರು.

ಉಡುಪಿಯಲ್ಲಿ ಅಥ್ಲೆಟಿಕ್ ಅಕಾಡಮಿ ಸ್ಥಾಪಿಸಲು 1.5 ಕೋ. ರೂ., ಶಟಲ್ ಒಳಾಂಗಣ ಕ್ರೀಡಾಂಗಣಕ್ಕೆ ಹವಾ ನಿಯಂತ್ರಣ ವ್ಯವಸ್ಥೆ ಕಲ್ಪಿಸಲು 1 ಕೋ.ರೂ., ಲಾನ್ ಟೆನಿಸ್ ಕೋರ್ಟ್ ನಿರ್ಮಾಣಕ್ಕೆ 3.5ಕೋ.ರೂ. ಮಂಜೂರು ಮಾಡಲಾಗಿದೆ. ಹೀಗೆ ಉಡುಪಿಯನ್ನು ಕ್ರೀಡಾ ರಾಜಧಾನಿಯನ್ನಾಗಿ ಮಾಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಲ್ಲಾಕಾರಿ ಪ್ರಿಯಾಂಕಾ ಮೇರಿ ್ರಾನ್ಸಿಸ್, ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ದಿನೇಶ್ ಪುತ್ರನ್ ಉಪಸ್ಥಿತರಿದ್ದರು.

ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಕೊರಗ ಮುಖಂಡ ಗಣೇಶ್ ಕುಂದಾಪುರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶೇಖರ್ ಮರವಂತೆ ವಂದಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.

ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆ

ಕ್ರೀಡೆಗೆ ವೈಜ್ಞಾನಿಕವಾಗಿ ಶಕ್ತಿ ನೀಡುವ ನಿಟ್ಟಿನಲ್ಲಿ ಬೆಂಗಳೂರು ಹಾಗೂ ಉಡುಪಿಗೆ ಕ್ರೀಡಾ ವಿಜ್ಞಾನ ಕೇಂದ್ರವನ್ನು ಮಂಜೂರು ಮಾಡಲಾಗಿದೆ. ಇದಕ್ಕೆ 2 ಕೋ. ರೂ. ಅನುದಾನ ಒದಗಿಸಲಾಗಿದೆ.

 -ಪ್ರಮೋದ್ ಮಧ್ವರಾಜ್

  ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News