ಬೈಕ್ ಢಿಕ್ಕಿ: ಪಾದಚಾರಿ ಮೃತ್ಯು

Update: 2017-05-27 10:46 GMT

ಚಿಕ್ಕಮಗಳೂರು, ಮೇ 27: ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಮೃತಪಟ್ಟಿರುವ ಘಟನೆ ನಗರದ ಎಪಿಎಂಸಿ ರಸ್ತೆಯಲ್ಲಿ ನಡೆದಿದೆ.

ಮೃತನನ್ನು ಚಿಕ್ಕ ಬಾಣೂರು ಎಂಬಲ್ಲಿನ ಧನಂಜಯ್ (54) ಎಂದು ಗುರುತಿಸಲಾಗಿದೆ.

ಅವರು ನಗರದ ಎಪಿಎಂಸಿ ಬಳಿ ರಸ್ತೆ ದಾಟುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ  ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿದೆ. ಈ ವೇಳೆ ಗಂಭೀರ ಗಾಯಗೊಂಡ ಅವರನ್ನು ಮಲ್ಲೇಗೌಡ ಸರ್ಕಾರಿ ಜಿಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿಗೆ ಕರೆದೊಯ್ಯುವ ಮಾರ್ಗದ  ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
 ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News