ಮಳೆ ನೀರಿನಲ್ಲಿ ಕೊಚ್ಚಿ ಹೋದ ಮಹಿಳೆ

Update: 2017-05-27 16:46 GMT

ನಾಗಮಂಗಲ, ಮೇ 27: ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ತುಂಬಿ ಹರಿದ ಹಳ್ಳದಲ್ಲಿ ಮಹಿಳೆಯೊಬ್ಬರು ಕೊಚ್ಚಿ ಹೋಗಿರುವ ಘಟನೆ ತಾಲೂಕಿನ ಮಣ್ಣಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆತ್ತಗೋನಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.

ಹೆತ್ತಗೋನಹಳ್ಳಿ ಗ್ರಾಮದ ಜಯರಾಮು ಎಂಬವರ ಪತ್ನಿ ಲಕ್ಷ್ಮಮ್ಮ ಕೊಚ್ಚಿ ಕೊಂಡು ಹೋದ ಮಹಿಳೆ. ಈಕೆ ಹೊಲದಲ್ಲಿ ಕುರಿ ಮೇಯಿಸುತ್ತಿದ್ದಾಗ ಸಂಜೆ ಸುರಿದ ಮಳೆಗೆ ತುಂಬಿ ಹರಿದ ಹಳ್ಳವನ್ನು ದಾಟುವಾಗ ಕೊಚ್ಚಿ ಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News