ಅಲ್ಪಸಂಖ್ಯಾತ ಬಡಜನರ ಅಭಿವೃದ್ಧಿಗೆ ಶ್ರಮಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

Update: 2017-05-27 17:13 GMT

ಮಡಿಕೇರಿ, ಮೇ 27: ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಫಲಾನುಭವಿಗಳಿಗೆ ಯೋಜನೆಯ ಲಾಭ ಸಿಗುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿಯವರ 15 ಅಂಶ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರಕಾರ ವಿವಿಧ ಇಲಾಖೆಗಳ ಮೂಲಕ ಕಾರ್ಯಕ್ರಮಗಳನ್ನು ಮೀಸಲಿಟ್ಟಿದೆ.

ಅವುಗಳಿಗೆ ಕ್ರಿಯಾಯೋಜನೆ ತಯಾರಿಸಿ ಸಕಾಲದಲ್ಲಿ ಸೌಲಭ್ಯಗಳನ್ನು ತಲುಪಿಸುವಂತಾಗಬೇಕು ಮತ್ತು ಅಧಿಕಾರಿಗಳಿಗೆ ಕೊಟ್ಟಿರುವ ಶೇಕಡವಾರು ಪ್ರಗತಿ ಸಾಧಿಸುವಂತೆ ಸಂಬಂಧ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಶಾಲಾ ಶೈಕ್ಷಣಿಕ ಸೌಲಭ್ಯ ಹೆಚ್ಚಿಸುವುದು, ಸ್ವ ಉದ್ಯೋಗ ಕೈಗೊಳ್ಳಲು ಅನುವು ಮಾಡುವುದು, ಗ್ರಾಮೀಣ ವಾಸ ಯೋಜನೆಯಲ್ಲಿ ಸಮಾನ ಪಾಲು ನೀಡುವುದು, ಹೀಗೆ ವಿವಿಧ ಸೌಲಭ್ಯವನ್ನು ಕಲ್ಪಿಸುವ ಮೂಲಕ ಅಲ್ಪಸಂಖ್ಯಾತ ಬಡಜನರ ಅಭಿವೃದ್ಧಿಗೆ ಶ್ರಮಿಸಬೇಕು.


ಆಯಾಯ ವರ್ಷದಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಬಳಸುವ ನಿಟ್ಟಿನಲ್ಲಿ ಸಂಬಂಧಪಟ್ಟವರಿಗೆ ಮಾಹಿತಿ ನೀಡುವಂತಾಗಬೇಕು. ವಿವಿಧ ಇಲಾಖೆಗಳು ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳಿದ್ದು, ಇವುಗಳು ಹೆಚ್ಚು ಪ್ರಗತಿ ಸಾಧಿಸುವಂತಾಗಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಸೂಚನೆ ನೀಡಿದರು.

ಅಲ್ಪಸಂಖ್ಯಾತರಿಗಾಗಿ ಮೀಸಲಿಟ್ಟಿರುವ ಅನುದಾನ ಹಾಗೂ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಸ್ಥಳೀಯವಾಗಿ ಹೆಚ್ಚಿನ ಮಾಹಿತಿ ಒದಗಿಸಬೇಕು. ಹಾಗೆಯೇ ಫಲಾನುಭವಿಗಳು ಇದ್ದಲ್ಲಿ ಸಂಪೂರ್ಣ ಸಹಕಾರ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ಜಿಪಂ ಸಿಇಒ ಚಾರುಲತಾ ಸೋಮಲ್ ಮಾತನಾಡಿ, ಅಲ್ಪಸಂಖ್ಯಾತರು, ಹಿಂದುಳಿದವರು, ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಟ್ಟು, ಬಡ ಜನರ ಒಳಿತಿಗೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಬಿ.ಸಿ.ಎಂ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.ವಿ.ಸುರೇಶ್, ಅಲ್ಪಸಂಖ್ಯಾತರ ಅಭಿವೃದ್ಧ್ದ್ದಿಗೋಸ್ಕರಪ್ರಧಾನಮಂತ್ರಿಯವರ 15 ಅಂಶಗಳ ಯೋಜನೆಯಡಿಯಲ್ಲಿ ಶೈಕ್ಷಣಿಕ ಅವಕಾಶಗಳನ್ನು ಹೆಚ್ಚಿಸುವುದು, ಆರ್ಥಿಕ ಚಟುವಟಿಕೆ ಹಾಗೂ ಉದ್ಯೋಗದಲ್ಲಿ ಅವಕಾಶ, ಅಲ್ಪಸಂಖ್ಯಾತರ ಜೀವನ ಮಟ್ಟವನ್ನು ಉತ್ತಮಪಡಿಸುವುದು, ಹಲವು ಅಂಶಗಳನ್ನು ಒಳಗೊಂಡಂತೆ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಇಲಾಖೆ ಅಧಿಕಾರಿಗಳು ಕೈಜೋಡಿಸುವಂತೆ ಮನವಿ ಮಾಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಲ್ಲೇಸ್ವಾಮಿ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ.ಸಿ.ನಾಗರಾಜು, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಪ್ರಭು, ಜಿಪಂ..ಇಂಜಿನಿಯರ್ ಮಂಜುನಾಥ್, ಕೃಷಿ ಇಲಾಖೆಯ ಉಪ ನಿರ್ದೇಶಕ ರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಯಲಕ್ಷ್ಮೀಬಾಯಿ, ಬಿಸಿಎಂ ಇಲಾಖೆಯ ವ್ಯವಸ್ಥಾಪಕ ಪುಟ್ಟರಾಜು, ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ಹಾಗೂ ಪಟ್ಟಣ ಪಂಚಾಯತ್ ಅಧಿಕಾರಿಗಳು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News