ರಕ್ತದೊತ್ತಡ ಸಮಸ್ಯೆ: ಕೇರಳ ಮಾಜಿ ಮುಖ್ಯಮಂತ್ರಿ ಅಚ್ಯುತಾನಂದನ್ ಆಸ್ಪತ್ರೆಗೆ ದಾಖಲು

Update: 2017-05-28 16:02 GMT

ಕೇರಳ, ಮೇ 28: ಉಸಿರಾಟದ ಸಮಸ್ಯೆ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದ ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್ ರನ್ನು ತಿರುವನಂತಪುರಂನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ಎರಡು ದಿವಸಗಳಿಂದ ತೀವ್ರ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಅಚ್ಯುತಾನಂದ್ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದರಿಂದ ಇಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾಸನಾಳದ ಸಮಸ್ಯೆಯಿಂದ ಅವರ ಉಸಿರಾಟದಲ್ಲೂ ಏರುಪೇರಾಗಿತ್ತು. ಇದೀಗ ಪರಿಸ್ಥಿತಿ ಸುಧಾರಿಸಿದೆ ಎಂದು ಅಚ್ಯುತಾನಂದನ್ ರ ಕಾರ್ಡಿಯಾಲಜಿಸ್ಟ್ ಡಾ.ಸಿ.ಭರತ್ ಚಂದ್ರನ್ ಹೇಳಿದ್ದಾರೆ,

ಅಚ್ಯುತಾನಂದನ್ ಆಸ್ಪತ್ರೆಗೆ ದಾಖಲಾದ ತಕ್ಷಣವೇ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕರೆ ಮಾಡಿ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದ್ದರು ಎಂದು ವೈದ್ಯರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News