ಅಪಘಾತ: ಐವರಿಗೆ ಗಾಯ
Update: 2017-05-28 16:36 GMT
ಹೆಬ್ರಿ, ಮೇ 28: ನಾಡ್ಪಾಲು ಗ್ರಾಮದ ಸೀತಾನದಿ ಬ್ರಹ್ಮಸ್ಥಾನದ ಬಳಿ ಇಂದು ಬೆಳಗ್ಗೆ 8.20ರ ಸುಮಾರಿಗೆ ಬಸ್ ಹಾಗೂ ಕಾರುಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಗಾಯಗೊಂಡ ಬಗ್ಗೆ ವರದಿಯಾಗಿದೆ.
ಬಾಳೆಹೊನ್ನೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಸಾರಿಗೆ ಬಸ್ಗೆ ಎದುರುಗಡೆಯಿಂದ ಅಂದರೆ ಉಡುಪಿ ಕಡೆಯಿಂದ ಆಗುಂಬೆ ಕಡೆಗೆ ಹೋಗುತ್ತಿದ್ದ ಕಾರು ಬಸ್ಗೆ ಢಿಕ್ಕಿ ಹೊಡೆಯಿತು. ಇದರಿಂದ ಕಾರಿನಲ್ಲಿದ್ದ ಚಾಲಕ ಸೇರಿ ಇಬ್ಬರು ಗಂಡಸರು ಮತ್ತು ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.