ಜಿಗುಪ್ಸೆ: ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

Update: 2017-05-28 17:45 GMT

ಭಾರತೀನಗರ, ಮೇ 28: ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಯಿಂದ ಮಕ್ಕಳನ್ನು ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿಗೆ ಸಮೀಪದ ಸುಣ್ಣದದೊಡ್ಡಿ ಬೊರೆಯಲ್ಲಿ ನಡೆದಿದೆ.

ಗ್ರಾಮದ ಲೀಲಾವತಿ (33), ಇವರ ಮಕ್ಕಳಾದ ಪಿ.ಕೆ.ತೇಜು(12), ಪಿ.ಕೆ.ಯಶ್ವಂತ್(9) ಮೃತರು ಎಂದು ಗುರುತಿಸಲಾಗಿದೆ.

ಕಳೆದ 15 ವರ್ಷಗಳ ಹಿಂದೆ ತೊರೆಬೊಮ್ಮನಹಳ್ಳಿ ಗ್ರಾಮದ ಆರ್.ಕುಮಾರ್ ಅವರೊಂದಿಗೆ ಚನ್ನಪಟ್ಟಣ ತಾಲ್ಲೂಕಿನ ಅರೆಭುವಳ್ಳಿಯ ಲೀಲಾವತಿ ಅವರನ್ನು ಮದುವೆ ಮಾಡಿಕೊಡಲಾಗಿತ್ತು.

ಆರ್ಥಿಕ ಹಾಗೂ ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಲೀಲಾವತಿ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News