ಕೆಪಿಸಿಸಿ ಅಧ್ಯಕ್ಷರ ಹೆಸರು ನಾಳೆ ಘೋಷಣೆ: ಮುಖ್ಯಮಂತ್ರಿ

Update: 2017-05-29 15:48 GMT

ಹೊಸದಿಲ್ಲಿ, ಮೇ 29: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಜೊತೆ ಇಂದು ಚರ್ಚೆ ನಡೆಸಲಾಗಿದೆ. ನಾಳೆ ಅಥವಾ ನಾಳಿದ್ದು ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷರ ಹೆಸರು ಘೋಷಣೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೋಮವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಪಕ್ಷದ ಸಂಘಟನೆ ಹಾಗೂ ಪದಾಧಿಕಾರಿಗಳ ಬದಲಾವಣೆ ಕುರಿತು ಸುದೀರ್ಘವಾಗಿ ಸಮಾಲೋಚನೆ ನಡೆಸಲಾಗಿದೆ ಎಂದರು.

ಮುಂಬರುವ ವಿಧಾನಸಭಾ ಚುನಾವಣೆಗೆ ತಯಾರಿ, ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆಯೂ ಚರ್ಚೆ ನಡೆದಿದೆ. ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡುವ ವಿಚಾರ ಈಗ ಚರ್ಚೆ ನಡೆಸಿಲ್ಲ ಎಂದು ಅವರು ಹೇಳಿದರು.

ವಿಧಾನಮಂಡಲದ ಮಳೆಗಾಲದ ಅಧಿವೇಶನದ ಬಳಿಕ ಸಚಿವ ಸಂಪುಟದಲ್ಲಿ ಖಾಲಿಯಿರುವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News