ಕೆ.ಸಿ.ಎಫ್. ಅಝೀಝಿಯಾ ಝೋನ್ ಸಮಿತಿ ಮಹಾ ಸಭೆ

Update: 2017-05-29 17:25 GMT

ದೋಹಾ, ಮೇ 29: ಅನಿವಾಸಿ ಕನ್ನಡಿಗರ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಕತ್ತರ್ ರಾಷ್ಟ್ರೀಯ ಸಮಿತಿಯ ಅಧೀನದಲ್ಲಿರುವ ಅಝೀಝಿಯಾ ಝೋನ್ ಸಮಿತಿಯ ವಾರ್ಷಿಕ ಮಹಾಸಭೆಯು ಇತ್ತೀಚಿಗೆ ದೋಹಾದಲ್ಲಿ ನಡೆಯಿತು.

ಕೆಸಿಎಫ್ ಕತ್ತರ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಹಾಫಿಝ್ ಉಮರುಲ್ ಫಾರೂಖ್ ಸಖಾಫಿ ಎಮ್ಮೆಮಾಡು ದುಆಃ ನೆರವೇರಿಸಿದರು. ಕೆಸಿಎಫ್ ಕತ್ತರ್ ರಾಷ್ಟ್ರೀಯ ನಾಯಕ ಫಾರೂಖ್ ಕೃಷ್ಣಾಪುರ  ಸ್ವಾಗತಿಸಿದರು.

ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿಯ ಇಹ್ಸಾನ್ ವಿಭಾಗದ ಕಾರ್ಯದರ್ಶಿ ಹಾಗೂ ಕತ್ತರ್ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹೀಂ ಸಅದಿ ಪಾಣೆಮಂಗಳೂರು ಉದ್ಘಾಟಿಸಿದರು. ರಾಷ್ಟ್ರೀಯ ಸಮಿತಿ ಸಂಘಟನಾ ವಿಭಾಗದ ಅಧ್ಯಕ್ಷ ಯೂಸುಫ್ ಸಖಾಫಿ ಅಯ್ಯಂಗೇರಿ ಅಧ್ಯಕ್ಷತೆ ವಹಿಸಿದ್ದರು.

ಅಝೀಝಿಯಾ ಝೋನ್ ಅಧ್ಯಕ್ಷರಾದ ಖಾಲಿದ್ ಹಿಮಮಿ ಬೋಳಂತೂರು ವರದಿ ಮಂಡಿಸಿದರು. ರಾಷ್ಟ್ರೀಯ ಸಮಿತಿಯ ಕೋಶಾಧಿಕಾರಿ ಅಂದುಮಾಯಿ ನಾವುಂದ, ರಾಷ್ಟ್ರೀಯ ಸಮಿತಿಯ ಶಿಕ್ಷಣ ವಿಭಾಗದ ಅಧ್ಯಕ್ಷ ಸತ್ತಾರ್ ಅಶ್ರಫಿ ಮಠ, ರಾಷ್ಟ್ರೀಯ ಸಮಿತಿಯ ಶಿಕ್ಷಣ ವಿಭಾಗದ ಕಾರ್ಯದರ್ಶಿ ಹನೀಫ್ ಪಾತೂರು, ರಾಷ್ಟ್ರೀಯ ಸಮಿತಿ ಕಾರ್ಯಕಾರಿಣಿ ಸದಸ್ಯರಾದ ರಝಾಕ್ ಮುಂಡ್ಕೂರು, ಮದೀನಾ ಖಲೀಫಾ ಝೋನ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಸನ್ ಪುಂಜಾಲ್ಕಟ್ಟೆ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಭೆಯಲ್ಲಿ ನೂತನ ಸಮಿತಿಗೆ ಚಾಲನೆ ನೀಡಲಾಯಿತು. ಚುನಾವಣಾ ವೀಕ್ಷಕರಾಗಿ ರಾಷ್ಟ್ರೀಯ ಸಮಿತಿಯ ಸಂಘಟನಾ ವಿಭಾಗದ ಕಾರ್ಯದರ್ಶಿ ಮಿರ್ಷಾದ್ ಕನ್ಯಾನ ಆಗಮಿಸಿದ್ದರು. ನೂತನ ಸಮಿತಿಯ ಅಧ್ಯಕ್ಷರಾಗಿ ಖಾಲಿದ್ ಹಿಮಮಿ ಬೋಳಂತೂರು, ಪ್ರಧಾನ ಕಾರ್ಯದರ್ಶಿಯಾಗಿ ರಿಶಾದ್ ಅಬ್ದುಲ್ಲಾ ಕುಂದಾಪುರ ಹಾಗೂ ಕೋಶಾಧಿಕಾರಿಯಾಗಿ ಮುಸ್ತಫಾ ಮುಡಿಪು ಆಯ್ಕೆಯಾದರು.

ವಿವಿಧ ವಿಭಾಗದ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ನಸ್ರತುಲ್ಲಾ ಸಾಹೇಬ್ ಮಲ್ಪೆ, ಕಾರ್ಯದರ್ಶಿಯಾಗಿ ರಹೀಂ ಈಶ್ವರಮಂಗಲ, ಶಿಕ್ಷಣ ವಿಭಾಗದ ಅಧ್ಯಕ್ಷರಾಗಿ ಬಶೀರ್ ಚಿಕ್ಕಮಗಳೂರು, ಶಿಕ್ಷಣ ವಿಭಾಗದ ಕಾರ್ಯದರ್ಶಿಯಾಗಿ ಬಶೀರ್ ಮೋಂಟುಗೋಳಿ,      ಸಾಂತ್ವನ ವಿಭಾಗದ ಅಧ್ಯಕ್ಷರಾಗಿ ಬಶೀರ್ ಸಅದಿ ಕಬಕ, ಕಾರ್ಯದರ್ಶಿಯಾಗಿ ರಝಾಕ್ ಮುದುಂಗಾರ್, ಪಬ್ಲಿಷಿಂಗ್ ವಿಭಾಗದ ಅಧ್ಯಕ್ಷರಾಗಿ ಅಲಿ ಕೊಡಗು, ಕಾರ್ಯದರ್ಶಿಯಾಗಿ ಇಮ್ರಾನ್ ಕೂಳೂರು ಹಾಗೂ 16 ಮಂದಿ ಒಳಗೊಂಡ ಕಾರ್ಯಕಾರಿಣಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ರಿಶಾದ್ ಅಬ್ದುಲ್ಲಾ ಕುಂದಾಪುರ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News