ಸಮರ್ಥವಾಗಿ ಚುನಾವಣೆ ಎದುರಿಸಲು ಕಾಂಗ್ರೆಸ್ ನ 6 ಹೆಜ್ಜೆಗಳು

Update: 2017-05-31 15:40 GMT

ಹೊಸದಿಲ್ಲಿ, ಮೇ 31: ಕೆಪಿಸಿಸಿ ಅಧ್ಯಕ್ಷರಾಗಿ ಡಾ.ಜಿ.ಪರಮೇಶ್ವರ್ ಅವರನ್ನು ಪುನರಾಯ್ಕೆ ಮಾಡಿರುವ ಎಐಸಿಸಿ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಪ್ರಮುಖ ಆರು ನಿರ್ಣಯಗಳನ್ನು ಕೈಗೊಂಡಿದೆ.

  • ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃತ್ವದಲ್ಲೇ ಮುಂದಿನ ವಿಧಾನಸಭಾ ಚುನಾವಣೆ.
  • ಕೆಪಿಸಿಸಿ ಅಧ್ಯಕ್ಷರಾಗಿ ಡಾ. ಜಿ. ಪರಮೇಶ್ವರ್ ಮುಂದುವರಿಯಲಿದ್ದು, ಮುಂಬರುವ ಚುನಾವಣೆಯ ಸಂದರ್ಭ ಪಕ್ಷವನ್ನು ಸಂಘಟಿಸುವ ಹೊಣೆ ಅವರ ಮೇಲಿರುವುದರಿಂದ ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಲು ಸೂಚನೆ. 
  • ದಿನೇಶ್ ಗುಂಡೂರಾವ್ ಅವರೊಂದಿಗೆ ಎಸ್‌.ಆರ್‌. ಪಾಟೀಲ್‌ ರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ. ರಾಜ್ಯದ ದಕ್ಷಿಣ ಭಾಗದಲ್ಲಿ ಗುಂಡೂರಾವ್ ಹಾಗೂ ಉತ್ತರ ಭಾಗದಲ್ಲಿ ಪಾಟೀಲ್ ಅವರಿಗೆ ಪಕ್ಷದ ಹೊಣೆ.
  • ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್‌ ಅವರ ನೇಮಕ.
  • ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪರನ್ನು ಕಾಂಗ್ರೆಸ್ ಕಾರ್ಯಕಾರಿಯ ವಿಶೇಷ ಆಹ್ವಾನಿತರಾಗಿ ಸೇರ್ಪಡೆ. 
  • ಎಐಸಿಸಿ ಕಾರ್ಯದರ್ಶಿಯಾಗಿ ಸತೀಶ್‌  ಜಾರಕಿಹೊಳಿಯವರ ಆಯ್ಕೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News