ಕಂದೂರು ಪರಮೇಶ್ವರ ಐತಾಳ

Update: 2017-06-03 17:15 GMT

ಬಂಟ್ವಾಳ, ಜೂ. 3: ಧಾರ್ಮಿಕ, ಸಾಮಾಜಿಕ ನೇತಾರ, ಹಿರಿಯ ಸಹಕಾರಿ ಕಂದೂರು ಪರಮೇಶ್ವರ ಐತಾಳ್ (78) ಸ್ವಗೃಹದಲ್ಲಿ ನಿಧನರಾದರು.

ಮಂಗಳೂರು ಜನತಾ ಬಜಾರ್ ನಿವೃತ್ತ ವಿಭಾಗೀಯ ವ್ಯವಸ್ಥಾಪಕ, ಗಾಯತ್ರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿದ್ದ ಅವರು ಕೂಟ ಮಹಾಜಗತ್ತು ಬಂಟ್ವಾಳ ಅಂಗಸಂಸ್ಥೆಯ ಮಾಜಿ ಅಧ್ಯಕ್ಷರಾಗಿ, ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರದಲ್ಲಿ ಮೂರು ಅವಯ ಮೊಕ್ತೇಸರರಾಗಿ ಅವರು ಸೇವೆ ಸಲ್ಲಿಸಿದ್ದರು.

ಸಜೀಪಮುನ್ನೂರು ಯುವಕ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಕಳೆದ 35 ವರ್ಷಗಳಿಂದ ಗಣೇಶೋತ್ಸವ ಸಹಿತ ವಿವಿಧ ಧಾರ್ಮಿಕ ಕಾರ್ಯಗಳನ್ನು ಸಾಮಾಜಿಕ ಚಟುವಟಿಕೆಗಳನ್ನು ಸಂಘಟಿಸುವಲ್ಲಿ ಮುಂಚೂಣಿಯಲ್ಲಿದ್ದರು.

ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ