ರೈಲು ಢಿಕ್ಕಿ: ಅಪರಿಚಿತ ವ್ಯಕ್ತಿ ಮೃತ್ಯು

Update: 2017-06-04 15:57 GMT
ಉಡುಪಿ, ಜೂ. 4: ಮೂಡುಸಗ್ರಿಯ ಸೇತುವೆ ಬಳಿ ಇಂದು ಬೆಳಗ್ಗೆ ಚಲಿಸುತ್ತಿದ್ದ ರೈಲು ಢಿಕ್ಕಿ ಹೊಡೆದ ಪರಿಣಾಮ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಮಾರು 45-50ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯ ಜೇಬಿನಲ್ಲಿ ಕಾಸರಗೋಡಿನಿಂದ ಉಡುಪಿಗೆ ಜೂ.4ರಂದು ರೈಲಿನಲ್ಲಿ ಪ್ರಯಾಣಿಸಿದ ಸಾಮಾನ್ಯ ದರ್ಜೆಯ ಟಿಕೇಟ್ ಹಾಗೂ ಗೋದಿ ಬಣ್ಣದ ಬ್ಯಾಗ್ ಪತ್ತೆಯಾಗಿದೆ. ಈ ವ್ಯಕ್ತಿ ಇಂದ್ರಾಳಿಯಲ್ಲಿ ರೈಲ್ವೆ ನಿಲ್ದಾಣದಲ್ಲಿ ಇಳಿದು ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಹೋಗುತ್ತಿರುವಾಗ ರೈಲು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾಲು ತುಂಡಾಗಿ ಗಂಭೀರ ಗಾಯಗೊಂಡ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟರು. ಬೋಳು ತಲೆ, ಅರ್ದ ತೋಳಿನ ಶರ್ಟು, ಕಪ್ಪುಬಣ್ಣದ ಪ್ಯಾಂಟು ಧರಿಸಿರುವ ಇವರು 5.7ಅಡಿ ಎತ್ತರ ಇದ್ದಾರೆ. ಮೃತದೇಹವನ್ನು ಅಜ್ಜರಕಾಡು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News