ಕನ್ನಡ ಸಾಹಿತಿ ಎಚ್.ಎಸ್.ಶಿವಪ್ರಕಾಶ್‌ಗೆ ಕುಸುಮಾಗ್ರಜ ರಾಷ್ಟ್ರೀಯ ಪುರಸ್ಕಾರ

Update: 2017-06-07 15:59 GMT

ನಾಸಿಕ್, ಜೂ.7: ಕನ್ನಡದ ಖ್ಯಾತ ಕವಿ ಮತ್ತು ನಾಟಕಕಾರ ಎಚ್.ಎಸ್.ಶಿವಪ್ರಕಾಶ್ ಅವರನ್ನು ಪ್ರತಿಷ್ಠಿತ ‘ಕುಸುಮಾಗ್ರಜ ರಾಷ್ಟ್ರೀಯ ಪುರಸ್ಕಾರ-2017’ ಕ್ಕೆ ಆಯ್ಕೆ ಮಾಡಲಾಗಿದೆ.

 ನಾಸಿಕ್ ಮೂಲದ ಯಶವಂತರಾವ್ ಚವಾಣ್ ಮಹಾರಾಷ್ಟ್ರ ಮುಕ್ತ ವಿವಿ ನೀಡುವ ಈ ರಾಷ್ಟ್ರೀಯ ಪುರಸ್ಕಾರವು 1 ಲಕ್ಷ ರೂ.ನಗದು, ಸ್ಮರಣಿಕೆ ಮತ್ತು ಸನ್ಮಾನ ಪತ್ರವನ್ನು ಹೊಂದಿದ್ದು ಜೂ.15ರಂದು ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು . ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ ಸಾಹಿತ್ಯ ರಚಿಸುವ ಶಿವಪ್ರಕಾಶ್, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಪರಿಗಣಿಸಿ ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News