ಹಾವು ಕಚ್ಚಿ ಮಹಿಳೆ ಮೃತ್ಯು

Update: 2017-06-09 14:09 GMT

ಕೆ.ಆರ್.ಪೇಟೆ, ಜೂ.9: ತಾಲೂಕಿನ ಶೀಳನೆರೆ ಹೋಬಳಿಯ ರಾಯಸಮುದ್ರ ಗ್ರಾಮದ ರೈತ ಕುಳ್ಳಯ್ಯ ಎಂಬುವವರ ಪತ್ನಿ ವೆಂಕಟಲಕ್ಷ್ಮಮ್ಮ (45) ನಾಗರಹಾವು ಕಚ್ಚಿ  ಶುಕ್ರವಾರ ಮೃತಪಟ್ಟರು.

ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದ ವೆಂಕಟಲಕ್ಷ್ಮಮ್ಮ ಹಾವು ಕಡಿತದಿಂದ ಅಸ್ವಸ್ಥಗೊಂಡರು. ತಕ್ಷಣ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News