ಎಲ್ಪೆಲ್ ಜಲಾಲಿಯಾ ಮದರಸಕ್ಕೆ ರೈ ಭೇಟಿ
Update: 2017-06-10 16:25 GMT
ಬಂಟ್ವಾಳ, ಜೂ. 10: ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಕುಕ್ಕಿಪಾಡಿ ಗ್ರಾಮದ ಬದ್ರಿಯಾ ಜುಮಾ ಮಸೀದಿಯ ಆದೀನದಲ್ಲಿರುವ ಎಲ್ಪೆಲ್ ಜಲಾಲಿಯಾ ಮದರಸಕ್ಕೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಜಿಪಂ ಸದಸ್ಯ ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ಶೆಟ್ಟ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು.