ನಿವೃತ್ತ ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ
Update: 2017-06-10 16:36 GMT
ಮಂಗಳೂರು, ಜೂ. 10: ನಿವೃತ್ತ ಬ್ಯಾಂಕ್ ಅಧಿಕಾರಿಯೊಬ್ಬರು ಶುಕ್ರವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದು, ಘಟನೆ ಶನಿವಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮೂಡುಶೆಡ್ಡೆಯ ನಿವಾಸಿ ಹರೀಂದ್ರ ಮಲ್ಲಿ (58) ಎಂದು ಗುರುತಿಸಲಾಗಿದೆ.
ಮುಂಬಯಿಯಲ್ಲಿ ಬ್ಯಾಂಕ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಹರೀಂದ್ರ ಮಲ್ಲಿ 10 ವರ್ಷದ ಹಿಂದೆ ಸ್ವಯಂ ನಿವೃತ್ತಿ ಹೊಂದಿದ್ದರು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.