×
Ad

ಪ್ಲಾಸ್ಟಿಕ್ ನಿಷೇಧದ ಕುರಿತು ಅರಿವು

Update: 2017-06-12 22:41 IST

ಉಡುಪಿ, ಜೂ.12: ಸಾಲಿಗ್ರಾಮ ಪಟ್ಟಣ ಪಂಚಾಯತ್ ಸಭಾ ಭವನದಲ್ಲಿ ಪ್ಲಾಸ್ಟಿಕ್ ನಿಷೇಧದ ಕುರಿತು ಜನಜಾಗೃತಿ ಮೂಡಿಸಲು ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್‌ಗಳ ಮ್ಯಾನೇಜರ್‌ಗಳ ಸಮಾವೇಶ ಪಟ್ಟಣ ಪಂಚಾಯತ್ ಅಧ್ಯಕ್ಷೆ ರತ್ನಾ ನಾಗರಾಜ ಗಾಣಿಗ ಅಧ್ಯಕ್ಷತೆಯಲ್ಲಿ ನಡೆಯಿತು.

ಚಂದ್ರಶೇಖರ ಸೋಮಯಾಜಿ ಪ್ಲಾಸ್ಟಿಕ್ ನಿಷೇಧದ ಕುರಿತು ವಿವರಿಸಿದರು. ಮುಖ್ಯಾಧಿಕಾರಿ ಆರ್.ಶ್ರೀಪಾದ್ ಪುರೋಹಿತ್ ಪ್ಲಾಸ್ಟಿಕ್ ನಿಷೇಧದ ಅನುಷ್ಠಾನಕ್ಕೆ ಕೈಗೊಳ್ಳಬೇಕಾದ ಉಪಕ್ರಮಗಳ ಬಗ್ಗೆ ವಿವರಿಸಿದರು. ಕಿರಿಯ ಆರೋಗ್ಯ ನಿರೀಕ್ಷಕಿ ಮಮತಾ ಮಂಜುನಾಥ ಮಾಹಿತಿ ನೀಡಿದರು. ಚಂದ್ರಶೇಖರ ಸೋಮಯಾಜಿ ಪ್ಲಾಸ್ಟಿಕ್ ನಿಷೇದ ಕುರಿತು ವಿವರಿಸಿದರು.

ಮುಖ್ಯಾಧಿಕಾರಿ ಆರ್.ಶ್ರೀಪಾದ್‌ ಪುರೋಹಿತ್‌ ಪ್ಲಾಸ್ಟಿಕ್‌ ನಿಷೇದ ಅನುಷ್ಠಾನಕ್ಕೆ ಕೈಗೊಳ್ಳಬೇಕಾದ ಉಪ ಕ್ರಮಗಳ ಬಗ್ಗೆ ವಿವರಿಸಿದರು. ಕಿರಿಯ ಆರೋಗ್ಯ ನಿರೀಕ್ಷಕಿ ಮಮತಾ ಮಂಜುನಾಥ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News