ಬೈಕ್‌ಗೆ ಲಾರಿ ಢಿಕ್ಕಿ: ಬೈಕ್ ಸವಾರನ ಮೃತ್ಯು

Update: 2017-06-13 15:51 GMT

ಪುತ್ತೂರು : ಈಚರ್ ಲಾರಿ ಮತ್ತು ಬೈಕೊಂದರ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ, ಎಲೆಕ್ಟ್ರಿಷಿಯನ್ ವೃತ್ತಿಯ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ಪೆರ್ನೆ ಸಮೀಪದ ಕಡಂಬು ಬಳಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಭವಿಸಿದೆ.

ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಅಮೈ ನಿವಾಸಿ ಕಾಂತಪ್ಪ ಪೂಜಾರಿ ಅವರ ಪುತ್ರ ,ಎಲೆಕ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದ ಗುರುಪ್ರಸಾದ್(21ವ) ಮೃತಪಟ್ಟ ಯುವಕ.

 ಗುರುಪ್ರಸಾದ್ ಅವರು ಕಡೇಶಿವಾಲಯದ ತನ್ನ ಮನೆಯಿಂದ ಉಪ್ಪಿನಂಗಡಿ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಬೈಕಿಗೆ ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News