ಬಾವಿಗೆ ಹಾರಿ ವೃದ್ಧ ಆತ್ಮಹತ್ಯೆ

Update: 2017-06-14 08:54 GMT

ಉಪ್ಪಿನಂಗಡಿ, ಜೂ.14: ವೃದ್ಧರೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಳಾಲು ಗ್ರಾಮದ ಮುಡಿಪಿನಡ್ಕ ಎಂಬಲ್ಲಿ ಜೂ.14ರಂದು ನಡೆದಿದೆ.

ಮುಡಿಪಿನಡ್ಕ ನಿವಾಸಿ ಕರಿಯಪ್ಪ ಗೌಡ (75) ಆತ್ಮಹತ್ಯೆ ಮಾಡಿಕೊಂಡವರು. ಇಂದು ಬೆಳಗ್ಗೆ ಮನೆಯಿಂದ ನಾಪತ್ತೆಯಾಗಿದ್ದ ಕರಿಯಪ್ಪರಿಗಾಗಿ ಮನೆಮಂದಿ  ಹುಡುಕಾಟ ನಡೆಸಿದ್ದು, ಅವರ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಬಳಿಕ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಶವವನ್ನು ಮೇಲಕ್ಕೆತ್ತಿದರು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News