ದಯಾಮರಣ ನೀಡುವಂತೆ ಕೋರಿ 15 ಕೈದಿಗಳ ಉಪವಾಸ

Update: 2017-06-14 14:34 GMT

ಬೆಂಗಳೂರು, ಜೂ.14: ಸನ್ನಡತೆ ಆಧಾರದ ಮೇಲೆ ಜೈಲಿನಿಂದ ಬಿಡುಗಡೆ ಮಾಡಿ ಇಲ್ಲವೇ ದಯಾಮರಣಕ್ಕೆ ಅವಕಾಶ ನೀಡಿ ಎಂದು ಒತ್ತಾಯಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿರುವ 15 ಮಂದಿ ಕೈದಿಗಳು ಉಪವಾಸ ಸತ್ಯಾಗ್ರಹ ಆರಂಭಿಸಿರುವುದಾಗಿ ತಿಳಿದುಬಂದಿದೆ.

ಮಂಗಳವಾರದಿಂದ ಉಪವಾಸ ಆರಂಭಿಸಿದ್ದು, ಈಗಾಗಲೇ 15 ಕೈದಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಲ್ಕು ಪುಟಗಳ ಪತ್ರ ಬರೆದಿದ್ದಾರೆ ಎನ್ನಲಾಗಿದ್ದು, ಸರಕಾರ ನಮ್ಮನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದಲ್ಲಿ, ದಯಾಮರಣಕ್ಕಾದರೂ ಅವಕಾಶ ನೀಡಿ ಎಂದು ಕೋರಿದ್ದಾರೆ.

ಬಂಧಿಖಾನೆ ಇಲಾಖೆಯ ಮಹಾನಿರ್ದೇಶಕ ಸತ್ಯನಾರಾಯಣ ರಾವ್ ಅವರಿಗೆ ಸೂಕ್ತ ಕ್ರಮಕೈಗೊಳ್ಳುವಂತೆ ಸರಕಾರ ನಿರ್ದೇಶಿಸಿದೆ. ಕೈದಿಗಳನ್ನು ಸನ್ನಡತೆ ಮೇಲೆ ಬಿಡುಗಡೆ ಮಾಡುವ ಸಂಬಂಧ ಕಾನೂನು ತಜ್ಞರ ಜೊತೆ ಚರ್ಚಿಸಿ ವರದಿ ನೀಡಬೇಕೆಂದು ಗೃಹ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ ಎಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News