ನಾಳೆ 5 ಜಿಲ್ಲೆಗಳಲ್ಲಿ ಪೆಟ್ರೋಲ್ ಬಂಕ್ ಬಂದ್

Update: 2017-06-15 15:33 GMT

ಬೆಂಗಳೂರು, ಜೂ.15: ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆಗೆ ತಕ್ಕಂತೆ ಪ್ರತಿದಿನವೂ ಪೆಟ್ರೋಲ್ ದರವನ್ನು ಪರಿಷ್ಕರಣೆ ಮಾಡಬೇಕೆಂಬ ಕೇಂದ್ರ ಸರಕಾರದ ತೀರ್ಮಾನವನ್ನು ವಿರೋಧಿಸಿ ನಾಳೆ ಜೂ.16ರಂದು 5 ಜಿಲ್ಲೆಗಳ ಎಲ್ಲಾ ಪೆಟ್ರೋಲ್ ಬಂಕ್ ಬಂದ್‌ಗೆ ಕರೆ ಕೊಡಲಾಗಿದೆ.

ಜೂ. 16ರಿಂದ ದೇಶದಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ನ ಬೆಲೆ ಆಯಾ ದಿನವೇ ಪರಿಷ್ಕರಣೆ ಆಗುತ್ತದೆ. ಇದನ್ನು ರಾಜ್ಯ ಪೆಟ್ರೋಲ್ ಮಾಲೀಕರ ಸಂಘ ವಿರೋಧಿಸಿ ನಡೆದ ಸಭೆಯಲ್ಲಿ, ಮೈಸೂರು ವಿಭಾಗದಲ್ಲಿ ಬರುವ ಹಾಸನ, ಚಾಮರಾಜನಗರ, ರಾಮನಗರ, ಕೊಡಗು, ಮಂಡ್ಯ ಜಿಲ್ಲೆಗಳಲ್ಲಿ ಒಂದು ದಿನ ಬಂದ್ ಮಾಡಲಾಗುವುದು ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ಇಂದು ರಾತ್ರಿ ಮಧ್ಯರಾತ್ರಿ 12ಗಂಟೆಯಿಂದ ಶುಕ್ರವಾರ ಮಧ್ಯರಾತ್ರಿ 12ಗಂಟೆವರೆಗೆ ಪೆಟ್ರೋಲ್ ಬಂಕ್ ಬಂದ್ ಇರಲಿದೆ ಎಂದು ಮೂಲಗಳು ಹೇಳಿವೆ. ಆದರೆ ಬೆಂಗಳೂರು ಸೇರಿದಂತೆ ರಾಜ್ಯದ ಬೇರೆ ಕಡೆ ಬಂದ್ ಇಲ್ಲ ಎಂದು ಬೆಂಗಳೂರು ಪೆಟ್ರೋಲ್ ಮಾಲೀಕರ ಸಂಘದ ಅಧ್ಯಕ್ಷ ಲೋಕೇಶ್ ಪ್ರತಿಕ್ರಿಯೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News