ರಕ್ತದಾನಿ ಮಂಜುನಾಥ್‌ಗೆ ರಾಜ್ಯ ಪ್ರಶಸ್ತಿ

Update: 2017-06-17 14:08 GMT

ಉಡುಪಿ, ಜೂ.17: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಘ, ಭಾರತೀಯ ರೆಡ್‌ಕ್ರಾಸ್ ವತಿಯಿಂದ ಬೆಂಗಳೂರಿನ ಸರಕಾರಿ ಶುಶ್ರೂಷಾ ಮಹಾವಿದ್ಯಾ ಲಯದಲ್ಲಿ ಜೂ.14ರಂದು ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆಯಲ್ಲಿ ಈವರೆಗೆ 70 ಬಾರಿ ರಕ್ತದಾನ ಮಾಡಿದ ಉಡುಪಿಯ ಮಂಜುನಾಥ್ ಕೆ. ಅವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಆರ್.ಪಾಟೀಲ್, ಬೆಂಗಳೂರು ಮಹಾಪೌರ ಪದ್ಮಾವತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಸಂಸದೀಯ ಕಾರ್ಯದರ್ಶಿ ಉಮೇಶ್ ಬಿ. ಜಾದವ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News