ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ತಾಲೂಕು ಮಟ್ಟದ ಮಾಹಿತಿ ಕೇಂದ್ರ

Update: 2017-06-18 11:12 GMT

ಶಿವಮೊಗ್ಗ,ಜೂ.18: ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅಲ್ಪಸಂಖ್ಯಾತ ಸಮುದಾಯದವರ ಕಲ್ಯಾಣಕ್ಕಾಗಿ ಇರುವ ಕಾರ್ಯಕ್ರಮಗಳ ಅರಿವು ಮೂಡಿಸುವ ಮಾಹಿತಿ ಕೇಂದ್ರಗಳನ್ನು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತೆರೆಯಲಾಗಿದೆ.

ಭದ್ರಾವತಿ, ಶಿಕಾರಿಪುರ, ಸಾಗರ, ಸೊರಬ, ತೀರ್ಥಹಳ್ಳಿ ಮತ್ತು ಹೊಸನಗರ ತಾಲೂಕುಗಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಈ ಮಾಹಿತಿ ಕೇಂದ್ರಗಳನ್ನು ತೆರೆದಿದ್ದು, ಅಲ್ಪಸಂಖ್ಯಾತರ ಸಮುದಾಯದವರು ಸಂಬಂಧಪಟ್ಟ ತಾಲೂಕು ಮಾಹಿತಿ ಕೇಂದ್ರಕ್ಕೆ ಭೇಟಿ ನೀಡಿ ಸೌಲಭ್ಯ/ಯೋಜನೆಗಳ ಮಾಹಿತಿಂುನ್ನು ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಾಹಿತಿ ಕೇಂದ್ರ, ದೂ.ಸಂ.:08182-220206ನ್ನು ಸಂಪರ್ಕಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿ ಧರ್ಮಪ್ಪ ಟಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News