×
Ad

ಶ್ರೀಕಾಂತ್ ಮುಡಿಗೆ ಇಂಡೋನೇಷ್ಯಾ ಸೂಪರ್ ಕಿರೀಟ: ಸಕಾಯ್‌ಗೆ ಸೋಲು

Update: 2017-06-18 17:19 IST

ಜಕಾರ್ತ, ಜೂ.18: ಇಲ್ಲಿ ನಡೆದ ಇಂಡೊನೇಷ್ಯಾ ಓಪನ್ ಸೂಪರ್ ಸರಣಿ ಬ್ಯಾಡ್ಮಿಂಟನ್ ಪ್ರೀಮಿಯರ್ ಟೂರ್ನಿಯ ಪುರುಷರ ಸಿಂಗಲ್ಸ್‌ನ ಫೈನಲ್‌ನಲ್ಲಿ ಭಾರತದ ಕೆ.ಶ್ರೀಕಾಂತ್ ಗೆಲ್ಲುವ ಮೂಲಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಇಂದು ನಡೆದ ಫೈನಲ್‌ನಲ್ಲಿ ಅವರು ಜಪಾನ್‌ನ ಕಝುಮಸಾ ಸಕಾಯ್ ವಿರುದ್ಧ 21-11, 21-19 ಸೆಟ್‌ಗಳಿಂದ ಜಯಗಳಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವುದರೊಂದಿಗೆ ಈ ಪ್ರಶಸ್ತಿ ಜಯಿಸಿದ ಭಾರತದ ಮೊದಲ ಪುರುಷ ಆಟಗಾರ ಎನಿಸಿಕೊಂಡಿದ್ದಾರೆ. ಇದರೊಂದಿಗೆ ಶ್ರೀಕಾಂತ್ ಮೂರನೆ ಸೂಪರ್ ಸಿರೀಸ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಫೈನಲ್‌ನಲ್ಲಿ ಭಾರತದ ಕೆ.ಶ್ರೀಕಾಂತ್ ಗೆಲ್ಲುವ ಮೂಲಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಇಂದು ನಡೆದ ಫೈನಲ್‌ನಲ್ಲಿ ಅವರು ಜಪಾನ್‌ನ ಕಝುಮಸಾ ಸಕಾಯ್ ವಿರುದ್ಧ 21-11, 21-19 ಸೆಟ್‌ಗಳಿಂದ ಜಯಗಳಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವುದರೊಂದಿಗೆ ಈ ಪ್ರಶಸ್ತಿ ಜಯಿಸಿದ ಭಾರತದ ಮೊದಲ ಪುರುಷ ಆಟಗಾರ ಎನಿಸಿಕೊಂಡಿದ್ದಾರೆ. ಇದರೊಂದಿಗೆ ಶ್ರೀಕಾಂತ್ ಮೂರನೆ ಸೂಪರ್ ಸಿರೀಸ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News