ಕುತ್ತಾರು: ವ್ಯಕ್ತಿಯ ಮೇಲೆ ಹಲ್ಲೆಗೆ ಯತ್ನ; ಸ್ಥಳದಲ್ಲಿ ಬಿಗುವಿನ ವಾತಾವರಣ
Update: 2017-06-18 17:00 GMT
ಉಳ್ಳಾಲ, ಜೂ. 18: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಆಸ್ಪತ್ರೆಯ ಎದುರು ಫೈನಾನ್ಸ್ ಮಾಲಕನ ಮೇಲೆ ತಂಡವೊಂದು ಹಲ್ಲೆಗೆ ಯತ್ನಿಸಿರುವ ಘಟನೆ ರವಿವಾರ ರಾತ್ರಿ ಸಂಭವಿಸಿದೆ.
ಘಟನೆಯಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕುತ್ತಾರು ನಿವಾಸಿ ಹಾಗೂ ಫೈನಾನ್ಸ್ವೊಂದರ ಮಾಲಕ ಹರೀಶ್ ಕುತ್ತಾರ್ ಎಂಬವರ ಮೇಲೆ ತಂಡ ಹಲ್ಲೆಗೆ ಯತ್ನಿಸಿದೆ ಎಂದು ಆರೋಪಿಸಲಾಗಿದೆ.
ಹರೀಶ್ ರೋಗಿಯೊಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಹಿಂದಿರುಗುತ್ತಿದ್ದ ಸಂದರ್ಭ ತಂಡ ಫೈನಾನ್ಸ್ ಮಾಲಕರ ಮೇಲೆ ಹಲ್ಲೆಗೆ ಮುಂದಾಗಿದೆ ಎಂದು ತಿಳಿದುಬಂದಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಹೆಚ್ಚಿನ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.