ಮದ್ರಸಗಳಿಂದ ಅರ್ಜಿ ಆಹ್ವಾನ
Update: 2017-06-19 13:15 GMT
ಮಂಗಳೂರು, ಜೂ.19: ರಾಜ್ಯದ ಮದ್ರಸಗಳ ಆಧುನೀಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು ಅನುದಾನ ಬಿಡುಗಡೆ ಮಾಡುವ ಕುರಿತು ಅರ್ಹ ಮದ್ರಸ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನವಾಗಿದ್ದು, ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ, ಮೌಲನಾ ಅಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಇಲ್ಲಿಂದ ಪಡೆಯಲು ಪ್ರಕಟನೆ ತಿಳಿಸಿದೆ.