ಹಣ ವಾಪಸ್ ನೀಡಿ, ಇಲ್ಲವೇ ಶಿಕ್ಷೆ ಅನುಭವಿಸಿ: ಸಂತೋಷ್ ಲಾಡ್‌ಗೆ ಹೈಕೋರ್ಟ್ ಸೂಚನೆ

Update: 2017-06-19 16:07 GMT

ಬೆಂಗಳೂರು, ಜೂ.19: ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್‌ಗೆ ಸಚಿವ ಸಂತೋಷ್ ಲಾಡ್ 7.25 ಕೋಟಿ ರೂ. ಹಣ ನೀಡಬೇಕು, ಇಲ್ಲದಿದ್ದರೆ 6 ತಿಂಗಳ ಸೆರೆವಾಸ ಅನುಭವಿಸುವಂತೆ 42ನೆ ಎಸಿಎಂಎಂ ಕೋರ್ಟ್ ಆದೇಶಿಸಿದೆ.
   
 2014ರಲ್ಲಿ ರಾಕ್‌ಲೈನ್ ವೆಂಕಟೇಶ್ ಅವರಿಂದ ಸಚಿವ ಸಂತೋಷ್ ಲಾಡ್ ಸಾಲವಾಗಿ 6 ಕೋಟಿ ಹಣ ಪಡೆದು ವಾಪಸ್ ನೀಡದೆ ಸತಾಯಿಸಿದ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್ ಈ ಆದೇಶ ಹೊರಡಿಸಿದೆ.

ರಾಕ್‌ಲೈನ್ ವೆಂಕಟೇಶ್‌ಗೆ ಸಂತೋಷ್ ಲಾಡ್ ಚೆಕ್ ನೀಡಿದ್ದರು. ಆದರೆ ಅದು ಬೌನ್ಸ್ ಆಗಿತ್ತು. ಇದರ ವಿರುದ್ಧ ರಾಕ್‌ಲೈನ್ ವೆಂಕಟೇಶ್ ಕೋರ್ಟ್ ಮೆಟ್ಟಿಲೇರಿದ್ದರು. ಆಗ ಸಂತೋಷ್ ಲಾಡ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ಸೋಮವಾರ ಕೋರ್ಟ್ ಕಲಾಪಕ್ಕೆ ಸಂತೋಷ್ ಲಾಡ್ ಹಾಜರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News