ಚೂರಿಯಲ್ಲಿ ಯುವಕನ ಮೇಲೆ ಚೂರಿ ಇರಿತ

Update: 2017-06-20 04:26 GMT

   ಕಾಸರಗೋಡು, ಜೂ.20: ನಗರ ಹೊರವಲಯದ ಚೂರಿ ಎಂಬಲ್ಲಿ ಯುವಕನೋರ್ವನನ್ನು ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಗಂಭೀರ ಗಾಯಗೊಂಡ ಯುವಕನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೂರಿಯ ಅಲ್ತಾಫ್ ಗಾಯಗೊಂಡವರು. ಇರಿತ ಪ್ರಕರಣವು ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ. ಚೂರಿಯ ಫಾಸ್ಟ್ ಫುಡ್ ಹೋಟೆಲ್ ವೊಂದರಲ್ಲಿ ಆಹಾರ ಸೇವಿಸುತ್ತಿದ್ದ ಅಲ್ತಾಫ್ ಅವರ ಮೇಲೆ ಸಂದೀಪ್ ಎಂಬಾತನ ನೇತೃತ್ವದ ತಂಡವು ದಾಳಿ ನಡೆಸಿದೆ ಎಂದು ಹೇಳಲಾಗಿದೆ. ತಂಡವು ಅಲ್ತಾಫ್ ಅವರಿಗೆ ಇರಿದು ಗಂಭೀರ ಗಾಯಗೊಳಿಸಿದೆ. ಅಲ್ತಾಫ್ ಅವರನ್ನು ಕೂಡಲೇ ಕಾಸರಗೋಡು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

 ಕಾಸರಗೋಡು ಪೊಲೀಸರು ಸ್ಥಳಕ್ಕಾಮಿಸಿ ಮುನ್ನಚ್ಚರಿಕಾ ಕ್ರಮ ತೆಗೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News