ಎಕ್ಸಲೆಂಟ್ ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

Update: 2017-06-20 14:52 GMT

ಮೂಡುಬಿದಿರೆ,ಜೂ.20 : ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ವಾಣಿಜ್ಯ ಸಂಘದ ವಾರ್ಷಿಕ ಚಟುವಟಿಕೆಗಳನ್ನು ಮೂಡುಬಿದಿರೆ ಯುವ ಉದ್ಯಮಿ ಮಹೇಂದ್ರವರ್ಮ ಜೈನ್ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ವ್ಯವಹಾರ ಕೇತ್ರದಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗಿರುವ ಅವಕಾಶಗಳು ಮತ್ತು ಅದರಲ್ಲಿ ಪರಿಶ್ರಮದಿಂದ ಸಫಲತೆಯನ್ನು ಪೆಯುವುದರ ಬಗ್ಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಸಂಸ್ಥೆಯ ಅಧ್ಯಕ್ಷ  ಯುವರಾಜ ಜೈನ್, ವಾಣಿಜ್ಯ ಸಂಘದ ಈ ವರ್ಷದ ಪ್ರಥಮ ಭಿತ್ತಿಪತ್ರಿಕೆ ಫಾರ್ಚೂನ್   ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ  ರಶ್ಮಿತಾ ಜೈನ್, ಪ್ರಾಂಶುಪಾಲ ಸುರೇಶ್‌ಬಾಬು, ವಿಭಾಗ ಮುಖ್ಯಸ್ಥ ಪ್ರಶಾಂತ ಶೆಟ್ಟಿ, ವಾಣಿಜ್ಯ ಸಂಘದ ವಿದ್ಯಾರ್ಥಿನಿ ನಿಹಾರಿಕಾ ಡಿ.ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸುಮಂತ್ ಸ್ವಾಗತಿಸಿ, ನಿಹಾರಿಕ ಡಿ ಶೆಟ್ಟಿ ವಂದಿಸಿದರು. ಕಾರ್ಯಕ್ರಮವನ್ನು ವಿಘ್ನೇಶ್ ಕಾಮತ್ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News