ಸಾಲಬಾಧೆ : ರೈತ ಆತ್ಮಹತ್ಯೆ

Update: 2017-06-20 16:38 GMT

ಮಂಡ್ಯ, ಜೂ.20: ಸಾಲಬಾಧೆ ತಾಳಲಾರದೆ ರೈತನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾಂಡವಪುರ ತಾಲೂಕು ಕ್ಯಾತನಹಳ್ಳಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಕುಳ್ಳೇಗೌಡರ ಪುತ್ರ ಪುಟ್ಟಸ್ವಾಮಿ(50) ಜಮೀನಿನ ಬಳಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಎಕರೆ ಜಮೀನು ಹೊಂದಿದ್ದ ಪುಟ್ಟಸ್ವಾಮಿ ಎಸ್‌ಬಿಐನಲ್ಲಿ 1.5 ಲಕ್ಷ ರೂ ಎತ್ತುಗಾಡಿ ಸಾಲ, ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2.5 ಲಕ್ಷ ಬೆಳೆಸಾಲ, ಸುಮಾರು 5 ಲಕ್ಷ ರೂ. ಕೈಸಾಲ ಮಾಡಿದ್ದರು ಎನ್ನಲಾಗಿದೆ.

ಮಳೆಯಿಲ್ಲದೆ ಬೆಳೆನಷ್ಟ ಅನುಭವಿಸಿದ್ದ ಪುಟ್ಟಸ್ವಾಮಿ ಸಾಲ ತೀರಿಸಲು ಸಾಧ್ಯವಾಗದೆ ಮತ್ತು ಮಕ್ಕಳ ಶಿಕ್ಷಣಕ್ಕೆ ಹಣ ಹೊಂದಿಸಲಾಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.

ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News