ಸಮಾನ ವೇತನಕ್ಕಾಗಿ ಆಗ್ರಹಿಸಿ ಧರಣಿ

Update: 2017-06-21 13:04 GMT

ಬೆಂಗಳೂರು,ಜೂ.21: ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಿ ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯ ವಿದ್ಯುತ್ ಕಾರ್ಮಿಕರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಧರಣೆ ನಡೆಸಿದರು.

ಸುಪ್ರೀಂಕೋರ್ಟ್‌ನ ಆದೇಶದಂತೆ ಸಮಾನ ಕೆಲಸಕ್ಕೆ 21 ಸಾವಿರ ರೂ.ಗಳ ಸಮಾನ ವೇತನ ನೀಡಬೇಕು. ನೇರ ನೇಮಕಾತಿಯಲ್ಲಿ ಸೇವಾ ಹಿರಿತನದ ಆಧಾರದಲ್ಲಿ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು. ವಿದ್ಯುತ್ ಅವಘಡದಲ್ಲಿ ಸಾವನ್ನಪ್ಪುವ ಹಾಗೂ ಅಂಗವಿಕಲರಾಗಿರುವ ಕಾರ್ಮಿಕರ ಸಂಪೂರ್ಣ ಜವಾಬ್ದಾರಿಯನ್ನು ಇಲಾಖೆ ನಿರ್ವಹಿಸಬೇಕು ಎಂದು ವಿದ್ಯುತ್ ಕಾರ್ಮಿಕರ ಸಂಘಟನೆಯ ಅಧ್ಯಕ್ಷ ಸತ್ಯಬಾಬು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News