ಬಸವಣ್ಣ, ಅಂಬೇಡ್ಕರ್ ಜನಿಸಿದ ನಾಡಲ್ಲಿ ಜಾತಿ ರಾಜಕಾರಣ ನಡೆಯಲ್ಲ: ಸಿದ್ದರಾಮಯ್ಯ

Update: 2017-06-21 16:10 GMT

ಬೆಂಗಳೂರು, ಜೂ.21: ಕರ್ನಾಟಕ ಸರಕಾರ 50 ಸಾವಿರ ರೂ.ವರೆಗಿನ ರೈತರ ಸಾಲವನ್ನು ಮನ್ನಾ ಮಾಡಿದ್ದು, ಕೇಂದ್ರ ಸರಕಾರ ಕೂಡ ಉಳಿದ ರೈತರ ಸಾಲವನ್ನು ಮನ್ನಾ ಮಾಡಬೇಕೆಂದು ಬಿಜೆಪಿ ಸದಸ್ಯರು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬುಧವಾರ ವಿಧಾನ ಪರಿಷತ್‌ನಲ್ಲಿ ಭಾರತ ಸಂವಿಧಾನದ 151(2)ನೆ ಅನುಚ್ಛೇದದ ಅಡಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ, 50 ಸಾವಿರ ರೂ.ವರೆಗಿನ ಸಾಲವನ್ನು ರಾಜ್ಯ ಸರಕಾರ ಮನ್ನಾ ಮಾಡಿದೆ. ಹಾಗೆಯೇ ಕೇಂದ್ರ ಸರಕಾರ ಕೂಡ ಉಳಿದ ರೈತರ ಸಾಲವನ್ನು ಮನ್ನಾ ಮಾಡಬೇಕೆಂದು ಬಿಜೆಪಿ ಸದಸ್ಯರು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕೆಂದು ಆಗ್ರಹಿಸಿದರು.

ಬಿಜೆಪಿ ಅವರು ಮುಂದಿನ ಭಾರಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿದ್ದಾರೆ. ಆದರೆ, ನಮ್ಮ ಸರಕಾರದ ಆಡಳಿತವನ್ನು ಸೂಕ್ಷ್ಮವಾಗಿ ಗಮನಿಸಿರುವ ರಾಜ್ಯದ ಜನರು ಕಾಂಗ್ರೆಸ್ ಪಕ್ಷವನ್ನೇ ಮತ್ತೆ ಅಧಿಕಾರಕ್ಕೆ ತರಲಿದೆ ಎಂದು ಹೇಳಿದರು.
  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News