ಕಾಂಗ್ರೆಸ್ ನೇತೃತ್ವದ ವಿಪಕ್ಷದ ರಾಷ್ಟ್ರಪತಿ ಅಭ್ಯರ್ಥಿಗೆ ಜೆಡಿ-ಯು ಬೆಂಬಲ ಇಲ್ಲ

Update: 2017-06-21 16:39 GMT

ಪಾಟ್ನಾ, ಜೂ. 21: ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ್‌ಗೆ ವಿರುದ್ಧವಾಗಿ ಕಾಂಗ್ರೆಸ್ ನೇತೃತ್ವದ ವಿಪಕ್ಷ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಜೆಡಿ-ಯು ಶಾಸಕರು ಬೆಂಬಲಿಸಲಾರರು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾರೆ.

ಎನ್‌ಡಿಎ ಆಯ್ಕೆ ಮಾಡಿದ ರಾಷ್ಟ್ರಪತಿ ಅಭ್ಯರ್ಥಿ ರಾಮ್‌ನಾಥ್ ಕೋವಿಂದ್‌ಗೆ ಬಿಹಾರ್ ಆಡಳಿತಾರೂಢ ಜನತಾ ದಳ (ಸಂಯುಕ್ತ) ಅಧಿಕೃತವಾಗಿ ಬೆಂಬಲ ಘೋಷಿಸಿದೆ.

ಪಕ್ಷ ರಾಮ್‌ನಾಥ್ ಕೋವಿಂದ್‌ಗೆ ಬೆಂಬಲ ವ್ಯಕ್ತಪಡಿಸಲು ನಿರ್ಧರಿಸಿದೆ. ನಮ್ಮ ಶಾಸಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ವಿಧಾನ ಸಭೆಯಲ್ಲಿ ಸೋನ್‌ಬರ್ಸಾವನ್ನು ಪ್ರತಿನಿಧಿಸುತ್ತಿರುವ ಜೆಡಿಯು ಶಾಸಕ ರತ್ನೇಶ್ ಸದಾ ತಿಳಿಸಿದ್ದಾರೆ.

ರಾಮ್ ನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮುನ್ನ ಅವರು ಬಿಹಾರದ ರಾಜ್ಯಪಾಲರಾಗಿದ್ದರು. ಅವರು ಉತ್ತಮ ವ್ಯಕ್ತಿ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಶಾಸಕರಿಗೆ ತಿಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News