ಸಾಲಬಾಧೆ: ಮಹಿಳೆ ಆತ್ಮಹತ್ಯೆ

Update: 2017-06-21 17:08 GMT

ಸೊರಬ, ಜೂ. 21: ಸಾಲಬಾಧೆ ತಾಳಲಾರದೆ ರೈತ ಮಹಿಳೆಯೋರ್ವಳು ವಿಷ ಸೇವಿಸಿ ಆತ್ಮ ಹತ್ಯೆಗೆ ಶರಣಾದ ಘಟನೆ ತಾಲ್ಲೂಕಿನ ಉಳವಿ ಹೋಬಳಿ ಇಂಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪಾರ್ವತಮ್ಮ (65) ಆತ್ಮಹತ್ಯೆ ಮಾಡಿಕೊಂಡವರೆಂದು ತಿಳಿದುಬಂದಿದೆ. ಕೃಷಿ ಅಭಿವೃದ್ಧಿಗಾಗಿ ಶಿರಾಳಕೊಪ್ಪದ ಬ್ಯಾಂಕ್‌ನಲ್ಲಿ ಸಾಲ ಒಂದು ಲಕ್ಷ ರೂ., ಹಾಗೂ ಇತರೆ ಕೈಗಡವಾಗಿ ಸಾಲ ಮಾಡಿದ್ದರು ಎನ್ನಲಾಗಿದೆ. ಬೆಳೆ ನಷ್ಟ ಹೊಂದಿ, ಸಾಲ ಹಿಂದಿರುಗಿಸಲು ಸಾಧ್ಯವಾಗದೇ ಇದ್ದುದ್ದರಿಂದ ಮನನೊಂದು ತಮ್ಮ ಮನೆಯಲ್ಲಿ ವಿಷ ಸೇವಿಸಿ ಆತ್ಮಯತ್ನೆಗೆ ಯತ್ನಿಸಿದ್ದು, ಕೂಡಲೇ ಅವರನ್ನು ಶಿವಮೊಗ್ಗಕ್ಕೆ ಚಿಕಿತ್ಸೆಗಾಗಿ ಸಾಗಿಸುವಾಗ ಮಾರ್ಗದ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News