ಇನೋಳಿ: ಕಿಡಿಗೇಡಿಗಳಿಂದ ಬಸ್ ಗಳಿಗೆ ಕಲ್ಲೆಸೆದು ಹಾನಿ
ಕೊಣಾಜೆ, ಜೂ. 22: ಕಳೆದ ರಾತ್ರಿ ಕೊಣಾಜೆ ಠಾಣಾ ವ್ಯಾಪ್ತಿಯ ಇನೋಳಿಯಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಬಸ್ ಗಳಿಗೆ ಕಿಡಿಗೇಡಿಗಳು ಕಲ್ಲೆಸೆದು ಹಾನಿ ಗೈದ ಘಟನೆ ನಡೆದಿದೆ.
ಗಣೇಶ್ ಶೆಟ್ಟಿ ಎಂಬವರ ಮಾಲಕತ್ವದ ಅಕ್ಷಯ ಹೆಸರಿನ ಎರಡು ಬಸ್ ಗಳು, ಪುರುಷೋತ್ತಮ ಶೆಟ್ಟಿ ಎಂಬವರ ಮಾಲಕತ್ವದ ಚಿತ್ರರಾಜ್ ಹಾಗೂ ಜಗನ್ನಾಥ ಶೆಟ್ಟಿ ಎಂಬವರ ಮಾಲಕತ್ವದ ಪದ್ಮಶ್ರೀ ಬಸ್ ಗಳನ್ನು ಎಂದಿನಂತೆ ಬುಧವಾರ ರಾತ್ರಿ ಕೂಡಾ ನಿಲ್ಲಿಸಲಾಗಿತ್ತು. ಈ ಸಂದರ್ಭ ಕಿಡಿಗೇಡಿಗಳು ಕಲ್ಲು ತೂರಿ ಗಾಜುಗಳನ್ನು ಪುಡಿಗೈದಿದ್ದಾರೆ.
ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲವು ತಿಂಗಳುಗಳ ಹಿಂದೆ ಪಾವೂರು ಸರ್ಕಾರಿ ಪ್ರೌಢಶಾಲೆಯ ಮುಂಭಾಗದ ಮುಖ್ಯರಸ್ತೆಯಲ್ಲಿ ಬಾಟಲ್ಗಳನ್ನು ಒಡೆದು ಹಾಕಿದ್ದಲ್ಲದೆ, ಸ್ಥಳೀಯರು ಬಸ್ ಪ್ರಯಾಣಿಕರಿಗಾಗಿ ನಿರ್ಮಿಸಿದ್ದ ತಾತ್ಕಾಲಿಕ ತಂಗುದಾಣಕ್ಕೆ ಹಾನಿಮಾಡಿದ ಘಟನೆಯೂ ನಡೆದಿದೆ. ಈ ಭಾಗದಲ್ಲಿ ಸೌಹಾರ್ಧತೆಗೆ ದಕ್ಕೆ ತರುವ ಯತ್ನ ಪದೆ ಪದೇ ನಡೆಯುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.