ಕೋಸೌವೇ ಖಂಡನೆ
Update: 2017-06-22 14:46 GMT
ಉಡುಪಿ, ಜೂ. 22: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ನಡೆದ ಎಸ್ಡಿಪಿಐ ಪಕ್ಷದ ಅಮ್ಮುಂಜೆ ಘಟಕದ ಅಧ್ಯಕ್ಷರ ಹತ್ಯೆಯನ್ನು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಉಡುಪಿ ಜಿಲ್ಲಾ ಘಟಕವು ತೀವ್ರವಾಗಿ ಖಂಡಿಸಿದೆ.
ಈಗಾಗಲೇ ಕಲ್ಲಡ್ಕದಲ್ಲಿ ನಡೆದಿರುವ ವಿದ್ಯಮಾನಗಳಿಂದ ಪ್ರಕ್ಷುಬ್ಧವಾಗಿರುವ ವಾತಾವರಣಕ್ಕೆ ಇಂತಹ ಕೃತ್ಯಗಳು ಮಾರಕವಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳು ಉದಾಸೀನ ತೋರದೇ ಈ ಕುಕೃತ್ಯದಲ್ಲಿ ಭಾಗಿಯಾಗಿರುವ ಹಂತಕರನ್ನು ಶೀಘ್ರವೇ ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮ ಜರಗಿಸಬೇಕೆಂದು ವೇದಿಕೆಯ ಅಧ್ಯಕ್ಷ ಜಿ.ರಾಜಶೇಖರ್ ಹಾಗೂ ಪ್ರಧಾನ ಕಾರ್ಯದರ್ಶಿ ದಿನಕರ ಬೇಂಗ್ರೆ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.