ಹೋಬಳಿ ಮಟ್ಟದ ಸಮಗ್ರ ಕೃಷಿ ಅಭಿಯಾನ

Update: 2017-06-22 14:54 GMT

ಉಡುಪಿ, ಜೂ. 22: ಉಡುಪಿ ಜಿಪಂ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ರೋಟರಿ ಕ್ಲಬ್ ಮಣಿಪುರ ಇವುಗಳ ಸಹಯೋಗದಲ್ಲಿ ಉಡುಪಿ ಹೋಬಳಿ ಮಟ್ಟದ ಸಮಗ್ರ ಕೃಷಿ ಅಭಿಯಾನ 2017-18, ಜಲಜಾಗೃತಿ ವರ್ಷ, ಕೃಷಿ ಭಾಗ್ಯ, ‘ಮಳೆಯಾಶ್ರಿತ ರೈತರಿಗೆ ವರದಾನ’ ‘ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕಾರ್ಯಕ್ರಮ ಜು. 4ರಂದು ಬೆಳಗ್ಗೆ 10:30ಕ್ಕೆ ಮಣಿಪುರ ರೋಟರಿ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News