ರಸ್ತೆ ಅಪಘಾತ: ಸ್ಕೂಟರ್ ಸವಾರ ಮೃತ್ಯು; ಸಹಸವಾರ ಗಾಯ

Update: 2017-06-23 05:06 GMT

ಉಡುಪಿ, ಜೂ. 23: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಾವರ ಮೃತಪಟ್ಟು ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬ್ರಹ್ಮಾವರದ ಮಾಬುಕಳದಲ್ಲಿ ನಡೆದಿದೆ.

ಮೃತರನ್ನು ಕುಂದಾಪುರ ತಾಲೂಕು ಕೋಡಿ ನಿವಾಸಿ ಹಸೈನಾರ್ ಅಕ್ಕೇರಿ ಎಂದು ಗುರುತಿಸಲಾಗಿದೆ. ಅವರು ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದು, ಕೆಲವು ತಿಂಗಳ ಹಿಂದೆ ಊರಿಗೆ ಬಂದಿದ್ದರು. ಗಂಭೀರ ಗಾಯಗೊಂಡ ಸಹಸವಾರನನ್ನು ತಾಹೀರ್ ಕೆ.ಎಂ. ಎಂದು ಗುರುತಿಸಲಾಗಿದ್ದು, ಅವರನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೋಡಿಯಿಂದ ಉಚ್ಚಿಲದ ತನ್ನ ಪತ್ನಿಯ ಮನೆಗೆ ತೆರಳುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News