ಅಪಘಾತ; ಸವಾರ ಮೃತ್ಯು

Update: 2017-06-23 10:07 GMT

ಸಾಗರ, ಜೂ.23: ತಾಲ್ಲೂಕಿನ ತ್ಯಾಗರ್ತಿ ಗ್ರಾಮದ ಶಿವರಾಜ್ (30) ಗುರುವಾರ ಬೆಳಿಗ್ಗೆ ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

ಶಿವರಾಜ್ ತ್ಯಾಗರ್ತಿಯಿಂದ ಸಾಗರಕ್ಕೆ ಬರುತ್ತಿದ್ದಾಗ ಯಳವರಸಿ ರಸ್ತೆಯಲ್ಲಿ ಎಮ್ಮೆಯೊಂದು ಅಡ್ಡ ಬಂದಿದೆ. ಶಿವರಾಜ್ ಎಮ್ಮೆಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ರಸ್ತೆಗೆ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ತಲೆಗೆ ಗಂಭೀರವಾಗಿ ಹೊಡೆತ ಬಿದ್ದಿದೆ.

ತಕ್ಷಣ ಶಿವರಾಜ್ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ಯುತ್ತಿದ್ದಾಗ ಆಯನೂರು ಸಮೀಪ ಮೃತಪಟ್ಟಿದ್ದಾರೆ. ಈ ಸಂಬಂಧ ಗ್ರಾಮಾಂತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News