ನಿಧನ: ರಂಗನಾಥ ಅಡಿಗ

Update: 2017-06-23 14:12 GMT

ಬ್ರಹ್ಮಾವರ, ಜೂ.23: ಶಿರಿಯಾರ ಗ್ರಾಪಂ ಮಾಜಿ ಸದಸ್ಯ ಪಡುಮುಂಡು ತೌಡಿನಹಕ್ಲು ರಂಗನಾಥ ಅಡಿಗ(77) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ನಿಧನರಾದರು.

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಹಲವಾರು ವರ್ಷಗಳ ಕಾಲ ದುಡಿದ ಇವರು ಶಿರಿಯಾರ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಸಾಬರಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ, ಜಂಬೂರು ಶ್ರೀಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿದ್ದರು. ಪ್ರಸ್ತುತ ವಿದ್ಯಾಪೋಷಕ ಸಮಿತಿ ಸಾಬರಕಟ್ಟೆ ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.

ಇವರು ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News