ನೇಣಿಗೆ ಶರಣಾದ ಸೈನಿಕ: ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Update: 2017-06-27 19:31 IST
ಮುಂಬೈ, ಜೂ.27: ಪುಣೆಯ ಖಾರ್ಕಿ ಪ್ರದೇಶಕ್ಕೆ ವರ್ಗಾವಣೆಗೊಂಡಿದ್ದ ಸೈನಿಕರೊಬ್ಬರು ಆತ್ಮಹತ್ಯೆಗೈದ ಘಟನೆ ಇಲ್ಲಿನ ನಾರಾಯಣ ಸೇವಾ ಆಶ್ರಮದಲ್ಲಿ ನಡೆದಿದೆ.
ಮೃತಪಟ್ಟ ಸೈನಿಕನನ್ನು ನೀರಜ್ ಕುಮಾರ್ ಯಾದವ್ ಎಂದು ಗುರುತಿಸಲಾಗಿದ್ದು, ಆಶ್ರಮದ ಸೀಲಿಂಗ್ ಫ್ಯಾನಿಗೆ ನೇಣು ಹಾಕಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.