ಜು.3ರಂದು ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರ ಪದಗ್ರಹಣ

Update: 2017-06-29 13:38 GMT

ಮಂಗಳೂರು, ಜೂ. 29: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ. ಹರೀಶ್ ಕುಮಾರ್ ಅವರ ಪದಗ್ರಹಣ ಸಮಾರಂಭವು ಜು.3ರಂದು ಬೆಳಗ್ಗೆ 10.30ಕ್ಕೆ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜರಗಲಿದೆ.

ಜಿಲ್ಲಾ ಕಾಂಗ್ರೆಸ್ ನಿರ್ಗಮನ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬಿ.ರಮಾನಾಥ ರೈ ಅವರು ಅಧಿಕಾರ ಹಸ್ತಾಂತರಿಸಲಿದ್ದಾರೆ.

ಸಮಾರಂಭದಲ್ಲಿ ಆಹಾರ ಸಚಿವ ಯು.ಟಿ. ಖಾದರ್, ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ವಸಂತ್ ಬಂಗೇರ, ಕರ್ನಾಟಕದ ಮುಖ್ಯ ಸಚೇತಕ ಐವನ್ ಡಿಸೋಜ, ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕಿ ಶಕುಂತಲಾ ಶೆಟ್ಟಿ, ಮಾಜಿ ಸಚಿವ ಅಭಯಚಂದ್ರ ಜೈನ್ ಶಾಸಕರಾದ ಜೆ.ಆರ್.ಲೋಬೋ, ಬಿ.ಎ. ಮೊಯ್ದಿನ್ ಬಾವ, ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್ ಭಾವಹಿಸಲಿದ್ದಾರೆ.

ಸಮಾರಂಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಘಟಕಗಳ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕೆ.ಪಿ.ಸಿ.ಸಿ. ಸದಸ್ಯರು, ವಿವಿಧ ನಿಗಮದ ಅಧ್ಯಕ್ಷರು ಮತ್ತು ಸದಸ್ಯರು, ಮಾಜಿ ಶಾಸಕರು, ಮಾಜಿ ಸಂಸದರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಪಕ್ಷದ ಸಕ್ರಿಯ ಕಾರ್ಯಕರ್ತರು, ಪಕ್ಷದ ಹಿತೈಷಿಗಳು ಭಾಗವಹಿಸಬೇಕೆಂದು ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News