ಜೆಪ್ಪು: ಜು.1ರಂದು ‘ಶಿಕ್ಷಾ ಚಿಂತನ್’

Update: 2017-06-30 09:58 GMT

ಮಂಗಳೂರು, ಜೂ.30: ಅಂಬೇಡ್ಕರ್ ಫ್ರೆಂಡ್ಸ್ ಕ್ಲಬ್ ಜೆಪ್ಪು ಹಾಗೂ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ(ಎಸ್.ಐ.ಒ.) ಮಂಗಳೂರು ಶಾಖೆಯ ಸಹಯೋಗದಲ್ಲಿ ಜು.1ರಂದು ಸಂಜೆ 5:30ಕ್ಕೆ ನಗರದ ಜೆಪ್ಪುವಿನಲ್ಲಿರುವ ಅಂಬೇಡ್ಕರ್ ಭವನದಲ್ಲಿ 'ಶಿಕ್ಷಾ ಚಿಂತನ್' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜಗತ್ತಿನಾದ್ಯಂತ ಶಿಕ್ಷಣಕ್ಕೆ ಹೆಚ್ಚು ಮಹತ್ವ ದೊರೆಯುತ್ತಿದ್ದರೂ ಕೂಡ, ನಮ್ಮ ದೇಶದಲ್ಲಿ ಹಲವು ಪ್ರಮುಖ ಸಮುದಾಯಗಳು ಇಂದಿಗೂ ಕೂಡ ಕಡೆಗಣಿಸಲ್ಪಟ್ಟಿವೆ. ಈ ಹಿನ್ನೆಲೆಯಲ್ಲಿ ಸಮಾಜದ ಎಲ್ಲಾ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಯನ್ನು ಮುಂದಿಟ್ಟು ನಡೆಯುವ ಈ ಕಾರ್ಯಕ್ರಮದಲ್ಲಿ ಎಸ್.ಐ.ಒ. ರಾಷ್ಟ್ರೀಯ ಕಾರ್ಯದರ್ಶಿ ಲಬೀದ್ ಶಾಫಿ, ಹಿರಿಯ ಚಿಂತಕರಾದ ರಾಮ್ ದಾಸ್, ಅಂಬೇಡ್ಕರ್ ಫ್ರೆಂಡ್ಸ್ ಕ್ಲಬ್ ಜೆಪ್ಪು ಇದರ ಅಧ್ಯಕ್ಷೆ ಶ್ವೇತಾ ಜೆಪ್ಪು, ಎಸ್.ಐ.ಒ. ನಗರಾಧ್ಯಕ್ಷ ಅಹ್ಮದ್ ಮುಬೀನ್ ಬೆಂಗ್ರೆ ಭಾಗವಹಿಸಲಿದ್ದಾರೆ.

ಇದೇ ವೇಳೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸುವ ಕಾರ್ಯವೂ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News