ಕರ್ಣನ್ ಪ್ರೆಸಿಡೆನ್ಸಿ ಜೈಲು ಆಸ್ಪತ್ರೆಗೆ

Update: 2017-06-30 14:27 GMT

ಕೋಲ್ಕತ್ತಾ, ಜೂ. 30: ಕೋಲ್ಕತ್ತಾ ಉಚ್ಚ ನ್ಯಾಯಾಲಯದ ಬಂಧಿತ ಮಾಜಿ ನ್ಯಾಯಮೂರ್ತಿ ಸಿಎಸ್ ಕರ್ಣನ್ ಅವರನ್ನು ಎಸ್‌ಎಸ್‌ಕೆಎಂ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಅವರ ಆರೋಗ್ಯ ಸ್ಥಿತಿ ಸುಧಾರಿಸಿರುವುದರಿಂದ ಮತ್ತೆ ಪ್ರೆಸಿಡೆನ್ಸಿ ಜೈಲು ಆಸ್ಪತ್ರೆಗೆ ಕಳುಹಿಸಲಾಗಿದೆ.

 ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ. ಆದುದರಿಂದ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲು ನಿರ್ಧರಿಸಿದೆವು. ಅವರಿಗೆ ವೈದ್ಯಕೀಯ ಮೇಲ್ವಿಚಾರಣೆ ಬೇಕಾಗಿದೆ ಎಂದು ಎಸ್‌ಎಸ್‌ಕೆಎಂ ಆಸ್ಪತ್ರೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಕರ್ಣನ್ ಅವರನ್ನು ಗುರುವಾರ ರಾತ್ರಿ ಎಸ್‌ಎಸ್‌ಕೆಎಂ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿತ್ತು. ಎದೆ ನೋವು ಹಾಗೂ ಅಸೌಖ್ಯದ ಹಿನ್ನೆಲೆಯಲ್ಲಿ ಜೂನ್ 22ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News