ಶಾಸಕರ ಅನುದಾನ ಬಿಡುಗಡೆ

Update: 2017-07-01 14:01 GMT

ಮಂಗಳೂರು, ಜು.1: ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಮಂಗಳೂರು ಶಾಸಕ ಯು.ಟಿ.ಖಾದರ್ ಅವರ 2016-17ನೆ ಸಾಲಿನ ಅನುದಾನದಲ್ಲಿ ಮಂಗಳೂರು ತಾಲೂಕು ಕಿನ್ಯಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಕೇಶಮನೆ ನಿವೇಶನ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ ರೂ. 1 ಲಕ್ಷ, ಮಂಗಳೂರು ತಾಲೂಕು ಕಿನ್ಯಾ ಗ್ರಾಮದ ಶಾಲೆಯಿಂದ ಮಸೀದಿವರೆಗೆ ರಸ್ತೆ ಡಾಮರೀಕರಣ ಕಾಮಗಾರಿಗೆ ರೂ. 5 ಲಕ್ಷ, ಮಂಗಳೂರು ತಾಲೂಕು ಕಿನ್ಯಾ ಗ್ರಾಮದ ಮಿಂಪ್ರಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ 2 ಲಕ್ಷ, ಮಂಗಳೂರು ತಾಲೂಕು ಕಿನ್ಯಾ ಗ್ರಾಮದ ಕುತುಬಿನಗರ 2ನೆ ಅಡ್ಡರಸ್ತೆ ಕಾಂಕ್ರಿಟಿಕರಣ ಕಾಮಗಾರಿಗೆ ರೂ. 1 ಲಕ್ಷ, ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News