ಹತ್ಯೆಗೀಡಾದ ಅಶ್ರಫ್ ಕಲಾಯಿ ಮನೆಗೆ ಐವನ್ ಡಿ'ಸೋಜ ಭೇಟಿ

Update: 2017-07-01 17:26 GMT

ಬಂಟ್ವಾಳ, ಜು.1: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸಾಮಾಜಿಕ ಕಾರ್ಯಕರ್ತ ಅಶ್ರಫ್ ಕಲಾಯಿ ಮನೆಗೆ ಕರ್ನಾಟಕ ವಿಧಾನ ಪರಿಷತ್ ಮುಖ್ಯ ಸಚೇತಕ  ಐವನ್ ಡಿ'ಸೋಜ  ಭೇಟಿ ನೀಡಿ ಕುಟಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಕೊಲೆಗಡುಕರು ಮತ್ತು ಅವರಿಗೆ ಸಹಕಾರ ನೀಡಿದವರು ಎಷ್ಟೇ ಪ್ರಭಾವಿಗಳಾದರೂ  ಕಾನೂನಿನ ಕೈಯಿಂದ ತಪ್ಪಿಸಲು ಅವಕಾಶ ನೀಡುವುದಿಲ್ಲ. ಈಗಾಗಲೇ ಮುಖ್ಯಮಂತ್ರಿ ಮತ್ತು ಗೃಹ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಸೂಕ್ತ ಕ್ರಮ ಜರಗಿಸುವ ಭರವಸೆ ನೀಡಿದ್ದಾರೆ. ಮೃತ ಅಶ್ರಫ್ ಕುಟುಂಬಕ್ಕೆ 
ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ  ಪ್ರಾಮಾಣಿಕವಾಗಿ ಪ್ರಯತ್ನ ನಡೆಸಲಾಗುವುದು ಎಂದು ಶಾಸಕರು ಇದೇ ಸಂದರ್ಭದಲ್ಲಿ ತಿಳಿಸಿದರು.

ಶಾಸಕರೊಂದಿಗೆ ದ.ಕ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ  ಕೆ.ಅಶ್ರಫ್, ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಸಿ.ಎಮ್.ಮುಸ್ತಫ, ಹಾರಿಸ್  ಬೈಕಂಪಾಡಿ ಉಪಸ್ತಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News