ಉಡುಪಿಯಲ್ಲಿ ಪೇಜಾವರ ಸ್ವಾಮೀಜಿ ವಿರುದ್ಧ ಪ್ರತಿಭಟನೆ

Update: 2017-07-02 06:04 GMT

ಉಡುಪಿ, ಜು.2: ಇತ್ತೀಚೆಗೆ ಉಡುಪಿ ಮಠದಲ್ಲಿ ಪೇಜಾವರ ಸ್ವಾಮೀಜಿ ಇತ್ತೀಚೆಗೆ ಆಯೋಜಿಸಿದ್ದ ಇಫ್ತಾರ್ ಕಾರ್ಯಕ್ರಮದ ವೇಳೆ ಮಠದ ಆವರಣದಲ್ಲಿ ನಮಾಝ್ ನಿರ್ವಹಿಸಲು ಅವಕಾಶ ಕಲ್ಪಿಸಿದ್ದನ್ನು ವಿರೋಧಿಸಿ ಇಂದು ಬೆಳಗ್ಗೆ ಉಡುಪಿ ಕ್ಲಾಕ್ ಟವರ್‌ಎದುರು ಪ್ರತಿಭಟನೆ ನಡೆಯಿತು.

ಶ್ರೀರಾಮ ಸೇನೆ, ಹಿಂದೂ ಜನಜಾಗೃತಿ ಸಮಿತಿ ಹಾಗೂ ಸನಾತನ ಸಂಸ್ಥೆಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಶ್ರೀಕೃಷ್ಣ ದೇವರಿಗೆ ಪ್ರಾರ್ಥಿಸಿ ಭಜನೆ ಮಾಡಿದರು.

ಪ್ರತಿಭಟನೆಯಲ್ಲಿ ಶ್ರೀರಾಮಸೇನೆ ಮಂಗಳೂರು ವಿಭಾಗದ ಕಾರ್ಯದರ್ಶಿ ಮೋಹನ್ ಭಟ್, ಹಿಂದೂ ಜಾಗೃತಿ ಸಮಿತಿಯ ಜಿಲ್ಲಾ ಸಮನ್ವಯಕ ವಿಜಯ ಕುಮಾರ್, ಶ್ರೀ ರಾಮಸೇನೆಯ ಜಿಲ್ಲಾ ವಕ್ತಾರ ಜಯರಾಮ್ ಅಂಬೇಕಲ್ಲು, ಜಿಲ್ಲಾಧ್ಯಕ್ಷ ದಿನೇಶ್ ಪಾಂಗಾಳ ಮತ್ತಿತರರು ಉಪಸ್ಥಿತರಿದ್ದರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಉಡುಪಿ ಶ್ರೀಕೃಷ್ಣ ಮಠದ ಸುತ್ತಮುತ್ತ ಹಾಗೂ ಉಡುಪಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News